Sunday, June 27, 2010

"ಸಂಸತ್ತಿನಲ್ಲಿ ಮೊಳಗಿದ ಕನ್ನಡ ಕಹಳೆ"

ರಾಜ್ಯದಿಂದ ಲೋಕಸಭೆಗೆ ಆಯ್ಕೆಯಾಗಿರುವ 28 ಸಂಸದರ ಪೈಕಿ 24 ಸಂಸತ್ ಸದಸ್ಯರು ಸೋಮವಾರ ಕನ್ನಡದಲ್ಲೇ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಸಂಸತ್ತಿನಲ್ಲಿ ಕನ್ನಡದ ಕಹಳೆ ಮೊಳಗಿಸಿದರು.

ರಾಜ್ಯ ಸರ್ಕಾರ 2009ನ್ನು ಕನ್ನಡ ಅನುಷ್ಠಾನ ವರ್ಷ ಎಂದು ಘೋಷಿಸಿರುವ ಹಿನ್ನೆಲೆಯಲ್ಲಿ ಹಾಗೂ ಕನ್ನಡಕ್ಕೆ ಶಾಸ್ತ್ರೀಯ ಭಾಷೆಯ ಸ್ಥಾನ ಮಾನ ದೊರಕಿರುವ ಪ್ರಸಕ್ತ ವರ್ಷದಲ್ಲಿ ಎಲ್ಲ ಸಂಸತ್ ಸದಸ್ಯರೂ ಕನ್ನಡದಲ್ಲೇ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಸಂಸತ್ತಿನಲ್ಲಿ ಕನ್ನಡದ ದನಿ ಎತ್ತುವಂತೆ ಕರ್ನಾಟಕ ರಕ್ಷಣಾ ವೇದಿಕೆ ಸೇರಿದಂತೆ ಹಲವು ಕನ್ನಡ ಪರ ಸಂಘಟನೆಗಳು ಮನವಿ ಮಾಡಿಕೊಂಡಿದ್ದವು.

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ಸಹ ನೂತನ ಸಂಸತ್ ಸದಸ್ಯರೆಲ್ಲರೂ ಕನ್ನಡದಲ್ಲೇ ಪ್ರಮಾಣ ವಚನ ಸ್ವೀಕರಿಸುವಂತೆ ಮನವಿ ಮಾಡಿದ್ದರು.

ಈ ಮನವಿಗೆ ಓಗೊಟ್ಟ ರಾಜ್ಯದ ಸಂಸತ್ ಸದಸ್ಯರು ಕನ್ನಡದಲ್ಲೇ ಪ್ರಮಾಣ ವಚನ ಸ್ವೀಕರಿಸಿದರೆ, ಕೇಂದ್ರ ಕಾನೂನು ಸಚಿವ ವೀರಪ್ಪ ಮೊಯ್ಲಿ ಹಾಗೂ ರೈಲ್ವೆ ಖಾತೆ ಸಹಾಯಕ ಸಚಿವ ಕೆ.ಎಚ್. ಮುನಿಯಪ್ಪ ಅವರಿಬ್ಬರು ಮಾತ್ರ ಆಂಗ್ಲವ್ಯಾಮೋಹ ಬಿಡದೆ ಇಂಗ್ಲಿಷ್ ನಲ್ಲೇ ಪ್ರಮಾಣ ವಚನ ಸ್ವೀಕರಿಸಿದರು. ಕನ್ನಡತನ ಮೆರೆದ ಸಂಸದರಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ಅಭಿನಂದನೆ ಸಲ್ಲಿಸಿದ್ದಾರೆ.

No comments:

Post a Comment